ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

“ವಚನ ಚಾರಿಟೇಬಲ್ ಸೊಸೈಟಿ: ನಾಟಕೋತ್ಸವದಲ್ಲಿ ಸಮಾಜ ಜಾಗೃತಿ ಕರೆ”
ವರದಿಗಾರರು : ಮಲ್ಲಿಕಾರ್ಜುನ ಬಿ ಎಚ್ | ಸ್ಥಳ : ಕಲಬುರಗಿ | ದಿನಾಂಕ : 15-11-2025

“ವಚನ ಚಾರಿಟೇಬಲ್ ಸೊಸೈಟಿ: ನಾಟಕೋತ್ಸವದಲ್ಲಿ ಸಮಾಜ ಜಾಗೃತಿ ಕರೆ”

ವಚನ ಚಾರಿಟೇಬಲ್ ಸೊಸೈಟಿ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಕ್ರಾಂತಿಕಾರಕ ಕಾರ್ಯ ಶ್ಲಾಘನೀಯ ಎಂದು ಶರಣ ಬಸವೇಶ್ವರ ವಿದ್ಯಾ ವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಶಂಸಿಸಿದರು. ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಹಾಗೂ ಶಿವಶರಣ ಹರಳಯ್ಯ ನಾಟಕೋತ್ಸವದಲ್ಲಿ ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದರು.

ಮಾತನಾಡಿದ ಅವರು, ನಾಟಕ ಕಲೆ–ಸಾಹಿತ್ಯ–ಸಂಸ್ಕೃತಿಯನ್ನು ಅರಿಯುವ ಸುಲಭ ದಾರಿ, ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮೃದ್ಧಿ ಸಾಧ್ಯ ಎಂದು ಹೇಳಿದರು.

ವಚನ ಟಿವಿಯ ಪ್ರಧಾನ ಸಂಪಾದಕ ಪ್ರೊ. ಸಿದ್ದು ಯಾಪಲಪರವಿ, “ಕನ್ನಡ ವಿಶ್ವದ ಶ್ರೇಷ್ಠ ಭಾಷೆಗಳಲ್ಲಿ ಒಂದು. ವಚನಗಳು ಕನ್ನಡದ ಚಿಂತನೆಗೆ ಮೂಳೆಸೇರಿದ ಶಕ್ತಿ. ವಚನ ಸಮೂಹ ಸಂಸ್ಥೆ 15 ವರ್ಷಗಳಿಂದ ನಿಷ್ಠಾವಂತ ಸೇವೆ ಸಲ್ಲಿಸುತ್ತಿದೆ” ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ನಾಟಕಗಳು ಮನಸ್ಸನ್ನು ಕಟ್ಟುವ ಸಾಂಸ್ಕೃತಿಕ ಉತ್ಸವಗಳಾಗಿವೆ. ಬಸವಾದಿ ಶರಣರು ಭಾಷೆ, ಬಾಂಧವ್ಯ, ಪರಂಪರೆಗಳಿಗೆ ಬಲ ನೀಡಿದ ಕ್ರಾಂತಿಕಾರರು ಎಂದು ಹೇಳಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಹೊಸ ಪೀಳಿಗೆಗೆ ವಚನ-ಕನ್ನಡ ಚಿಂತನೆಯ ಪರಿಚಯ ಅಗತ್ಯ. “ಎ–ಅಲ್ಲಮ, ಬಿ–ಬಸವ…” ಎಂಬ ಶೈಕ್ಷಣಿಕ ಜೊಡಣೆ ಮಕ್ಕಳಲ್ಲಿ ಹೊಸ ಚಿಂತನೆ ಮೂಡಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮಾಧ್ಯಕ್ಷರಾಗಿ ಮಾತನಾಡಿದ ವಚನ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಲ್ಲಮಪ್ರಭು ನಾವದಗೇರೆ, ಬರುವ 20 ಡಿಸೆಂಬರ್ 2027ರಂದು ಅನುಭವ ಮೆಗಾಸಿಟಿ ಲೋಕಾಪ್ರಣೆಗೆ ದೇಶದಾದ್ಯಂತದ 1,96,000 ಜನರನ್ನು ಸೇರಿಸುವ ಗುರಿ ಹೊಂದಿದ್ದೇವೆ. ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಪೂಜ್ಯ ಕೋರಣೇಶ್ವರ ಸ್ವಾಮಿಗಳು ಹಾಗೂ ತೋಂಟದಾರ್ಯ ಅನುಭವಮಂಟಪ ಆಳಂದ ಸ್ವಾಮಿಗಳು ಆಶೀರ್ವಚನ ನೀಡಿ, ಸೌಹಾರ್ದತೆ ಮತ್ತು ಒಗ್ಗಟ್ಟು ಸಮಾಜದ ಪ್ರಗತಿಯ ಆಧಾರ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ. ವಿಲಾಸವತಿ ಖುಬಾ ಅವರು ಜಗನ್ಮಾತೆ ಅಕ್ಕ ಮಹಾದೇವಿ ಚಲನಚಿತ್ರದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಿದರು.

ವೇದಿಕೆಯಲ್ಲಿ ಆರ್.ಜಿ. ಶೆಟಗಾರ, ಭೀಮಣ್ಣಾ ಬೋನಾಳ, ನಂದಿಕಾಶಿನಾಥ ದಿವಾಂಟಗಿ, ಡಾ. ಚಿತ್ರಶೇಖರ ವಾಗರಗಿ, ಶಿವಶಂಕರ ಟೋಕರೆ, ಶಿವಕುಮಾರ ಸಾಲಿ, ಬಾಬುರಾವ ಪಾಟೀಲ, ಶಿವಲಿಂಗಪ್ಪ ಗಣಪತಿ, ಅಶೋಕ ಘೂಳೆ, ರಾಜಶೇಖರ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.

ಕಲ್ಯಾಣನಾಡು ಗ್ರಾಮೀಣ ಜನಪದ ಕಲಾ ಸಂಘದ ನಾಡಗೀತೆ ಮತ್ತು ಸಂಗೀತ ಕಾರ್ಯಕ್ರಮದಿಂದ ಚಾಲನೆಗೊಂಡ ಕಾರ್ಯಕ್ರಮವನ್ನು ರವೀಂದ್ರ ಶಾಬಾದಿ ಪ್ರಾಸ್ತಾವಿಕ ನುಡಿದರು; ಬಸವರಾಜ ಮೊರಬದ ಸ್ವಾಗತಿಸಿದರು; ವೈಜಿನಾಥ ಸಜ್ಜನಶೆಟ್ಟಿ ನಿರೂಪಿಸಿದರು; ಅಂಬರಾಯ ಬಿರಾದರ ವಂದಿಸಿದರು. ಅಂತಿಮವಾಗಿ ಸಿರಗುಪ್ಪದ ಧಾತಿ ಸಂಸ್ಥೆ ಶಿವಶರಣ ಹರಳಯ್ಯ ನಾಟಕವನ್ನು ಪ್ರದರ್ಶಿಸಿತು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+