ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಭೂ ಕೈಲಾಸವಾಗಿ ಅರಳಿದ ಪುಷ್ಪಗಿರಿ—ಭಕ್ತ, ಮಠ ಮತ್ತು ರಾಜ್ಯದ ಸಹಕಾರಕ್ಕೆ ಶ್ಲಾಘನೆ
ವರದಿಗಾರರು : ಕೆ ಜಿ ಸುರೇಶ್ | ಸ್ಥಳ : ಹಾಸನ | ದಿನಾಂಕ : 21-11-2025

ಭೂ ಕೈಲಾಸವಾಗಿ ಅರಳಿದ ಪುಷ್ಪಗಿರಿ—ಭಕ್ತ, ಮಠ ಮತ್ತು ರಾಜ್ಯದ ಸಹಕಾರಕ್ಕೆ ಶ್ಲಾಘನೆ

ಹಳೇಬೀಡು: ಶ್ರೀ ಕ್ಷೇತ್ರ ಪುಷ್ಪಗಿರಿಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಭಕ್ತರು ಮತ್ತು ಸಾರ್ವಜನಿಕರಲ್ಲಿ ಹೊಸ ಚೈತನ್ಯವನ್ನು ಮೂಡಿಸಿವೆ. ಕಾರ್ತಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಗಿರಿ ಮಠದಲ್ಲಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕ್ಷೇತ್ರದ ಪರಿವರ್ತನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಭಕ್ತರ ಸಹಕಾರವೇ ಪ್ರಮುಖ ಎಂದು ಹೇಳಿದರು. ಯಡಿಯೂರಪ್ಪ ಅವರು ಟೀಕೆಗಳನ್ನು ಪರಿಗಣಿಸದೆ ಸಮಾಜಮುಖಿ ಕಾರ್ಯಗಳಿಗೆ ಸದಾ ನೆರವಾಗಿದ್ದು, ಮಠ ಮಾನ್ಯರಿಗೆ ನೀಡಿದ ಅನುದಾನದಿಂದ ಪುಷ್ಪಗಿರಿಯಲ್ಲಿ ಮಹತ್ವದ ಬದಲಾವಣೆ ಸಾಧ್ಯವಾಗಿದೆ ಎಂದು ಅವರು ಹೇಳಿದರು. ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೂಲಕ ಹಲವು ಕುಟುಂಬಗಳನ್ನು ಮುನ್ನಡೆಸುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು.

ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರ ನೀಡುವುದು ಪೋಷಕರ ಕರ್ತವ್ಯವಾಗಿದ್ದು, ಯುವಶಕ್ತಿಯನ್ನು ದುಶ್ಚಟಗಳಿಂದ ದೂರ ಇಡುವ ಜವಾಬ್ದಾರಿ ಸಮಾಜದದ್ದೇ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು. “ಯಡಿಯೂರಪ್ಪರಂತೆ ನಾನೂ ಸವಾಲುಗಳನ್ನು ಎದುರಿಸಿ ಜನಸೇವೆ ಮಾಡುವೆ,” ಎಂದು ಹೇಳಿದರು. ಸ್ಥಳೀಯ ಶಾಸಕ ಎಚ್‌.ಕೆ. ಸುರೇಶ್ ಮಾತನಾಡಿ, ಸ್ವಾಮೀಜಿಯವರ ಪರಿಶ್ರಮದಿಂದ ಪುಷ್ಪಗಿರಿ ಇಂದಿಗೆ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಸಿದ್ದರಾಮಪ್ಪ, ಡಿವೈಎಸ್‌ಪಿ ಎಚ್‌.ಜಿ. ಮಂಜುನಾಥ್, ಉದ್ಯಮಿ ಕೊರಟಗೆರೆ ಪ್ರಕಾಶ್, ಬಿ.ಸಿ. ತುಕಾರಾಂರಾವ್, ವಸಂತ ಶೇಖರ್ ಮತ್ತು ಕಾಫಿ ಬೆಳೆಗಾರ ದಿವಾಕರ ಅವರಿಗೆ ಸಮಾಜ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದೀಪಗಳ ಹೊಳಪಿನಲ್ಲಿ ಪುಷ್ಪಗಿರಿ ಮೆರಗು ೧೦೮ ಲಿಂಗ ಮಂದಿರ, ಗುರು ಕರಿಬಸವೇಶ್ವರ ಮಂದಿರ, ಆದಿಯೋಗಿ ಶಿವನ ವಿಗ್ರಹ ಹಾಗೂ ಮಠದ ಸಮಗ್ರ ಆವರಣವು ದೀಪಗಳಿಂದ ಕಂಗೊಳಿಸಿತು. ಸಾವಿರಾರು ಭಕ್ತರು ಭಾಗವಹಿಸಿ ದೀಪ ಬೆಳಗಿಸಿ ಭಕ್ತಿ ಸಮರ್ಪಿಸಿದರು. ಸ್ವಾಮೀಜಿಯವರ ನೇತೃತ್ವದಲ್ಲಿ ಶತ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾ ಮಂಗಳಾರತಿ ಮತ್ತು ಗಂಗಾರತಿ ನೆರವೇರಿಸಲಾಯಿತು. ಸಾಮೂಹಿಕ ಸಹಕಾರವೇ ಅಭಿವೃದ್ಧಿಯ ಶಕ್ತಿ “ಪುಷ್ಪಗಿರಿಯ ಅಭಿವೃದ್ಧಿಯಲ್ಲಿ ಯಡಿಯೂರಪ್ಪರ ಪಾತ್ರ ಮಹತ್ವದ್ದು; ವಿಜಯೇಂದ್ರರಿಗೂ ಕ್ಷೇತ್ರದ ಗೌರವ ಅಪಾರ. ಭಕ್ತರು ಮತ್ತು ಎಲ್ಲಾ ಸಮುದಾಯದವರ ಸಹಕಾರದಿಂದ ಪುಷ್ಪಗಿರಿ ಭೂ ಕೈಲಾಸದಂತಾಗಿದೆ. ಮುಂದಿನ ಅಭಿವೃದ್ಧಿಗಾಗಿ ಸಹಕಾರ ಅಗತ್ಯ,” ಎಂದು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+