ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 19-01-2026

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

ಸಾರ್ವಜನಿಕರ ಆಸ್ತಿ ಡಿಜಿಟಲೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಇ-ಖಾತಾ ಪ್ರಕ್ರಿಯೆ ಆರಂಭಿಸಿ ತಿಂಗಳು ಕಳೆದರೂ ತಾಂತ್ರಿಕ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ಜನರ ಪರದಾಟ ತಪ್ಪಿಲ್ಲ.

ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಇ-ಖಾತೆ ಪಡೆಯಲು ಅಥವಾ ಗ್ರಾಮ ಪಂಚಾಯಿತಿಯಿಂದಲೂ ಪಡೆಯಬಹುದೆಂದು ಸರ್ಕಾರ ಇ-ಸ್ವತ್ತು 2.0 ತಂತ್ರಾಂಶ ಪರಿಚಯಿಸಿದೆ. ತಾಲ್ಲೂಕಿನ ಕಸಬಾ, ದಂಡಿನಶಿವರ, ಮಾಯಸಂದ್ರ ಮತ್ತು ದಬ್ಬೇಘಟ್ಟ ಹೋಬಳಿಯ 27 ಗ್ರಾಮ ಪಂಚಾಯಿತಿಗಳಲ್ಲೂ ಸರ್ಕಾರ ಹೇಳಿದಂತೆ ಸಕಾಲಕ್ಕೆ ಇ-ಸ್ವತ್ತುಗಳು ಸಿಗುತ್ತಿಲ್ಲ. ಜನರು ತಮ್ಮ ದಾಖಲೆಗಳೊಂದಿಗೆ ಕಚೇರಿಗೆ ಹೋದರೆ ಇ-ಖಾತಾ ಸಾಫ್ಟ್‌ವೇರ್ ಕಾರ್ಯನಿರ್ವಹಿಸುತ್ತಿಲ್ಲ. ಸರಿಯಾದ ಮೇಲೆ ಬನ್ನಿ ಎಂದು ಪಂಚಾಯಿತಿ ಅಧಿಕಾರಿಗಳು ಹೇಳಿ ಕಳುಹಿಸುತ್ತಿದ್ದಾರೆ.

ಅರ್ಜಿದಾರ ಅಕೌಂಟ್ ನಂಬರ್ ಎಂಟ್ರಿ ಮಾಡಿದರೆ ಬೇರೊಬ್ಬರ ಹೆಸರು ಮತ್ತು ವಿಳಾಸ ಬರುತ್ತದೆ. ಇ-ಸ್ವತ್ತು ತಂತ್ರಾಂಶದ ವಿದ್ಯುತ್ ಬಿಲ್ ಕಾಲಂನಲ್ಲಿ 10 ಅಂಕಿಯ ಅಕೌಂಟ್ ನಂಬರ್ ಕೇಳುತ್ತದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೇವಲ ಏಳು ಅಂಕಿಯ ನಂಬರ್ ಇದೆ. ಅರ್ಜಿದಾರನ ಜಮೀನಿನ ಇ.ಸಿ ಫಿಟ್‌ ಆಗುತ್ತಿಲ್ಲ. ಇ-ಸ್ವತ್ತನ್ನು ಸಕಾಲದ ಮಾದರಿಯಲ್ಲಿ 15 ದಿನಗಳಿಗೆ ನಿಗದಿಪಡಿಸಿರುವುದರಿಂದ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗುತ್ತದೆ. ಇದರಿಂದ ಬಡವರಿಗೆ ಹಣ ಹೊಂದಿಸುವುದು ತೊಂದರೆಯಾಗಲಿದೆ.

ಗ್ರಾಮ ಠಾಣಾ ಸ್ವತ್ತುಗಳಿಗೆ ಸಂಬಂಧಿಸಿದ ಇ-ಸ್ವತ್ತು ಮಾಡುವಾಗ ನೋಂದಣಿಯಾಗಿರುವ ಸೇಲ್ ಡೀಡ್, ವಿಲ್ ಇನ್ನಿತರೆ ದಾಖಲೆಗಳನ್ನು ಕೇಳುತ್ತಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪಿತ್ರಾರ್ಜಿತ ಸ್ವತ್ತುಗಳಿಗೆ ನೋಂದಾಯಿತ ದಾಖಲೆಗಳು ಲಭ್ಯವಿಲ್ಲದಿರುವುದಿಲ್ಲ. ಅದೇ ರೀತಿ ಆಸ್ತಿ ಅಥವಾ ಜಮೀನಿನ ಅಳತೆಯನ್ನು ಅಡಿಗಳಲ್ಲಿ ಎಂಟ್ರಿ ಮಾಡಿದರೆ ಅದು ಮೀಟರ್ ಕಾಲಂನಲ್ಲಿ ನಮೂದಾಗುತ್ತದೆ. ಅರ್ಜಿದಾರ ಇ-ಕೆವೈಸಿ ಮಾಡಿದಾಗ ಆತನ ವಿಳಾಸ ಮತ್ತು ಸಂಬಂಧ ತಪ್ಪಾಗಿ ತೋರುತ್ತದೆ. ಈಗಾಗಲೇ ಅನುಮೋದನೆ ಪಡೆದಿರುವ ಬಡಾವಣೆಗಳಲ್ಲಿ ಬಾಕಿ ಇರುವ ನಿವೇಶನಗಳ ಇ-ಸ್ವತ್ತು ಮಾಡಲು ಸಾದ್ಯವಾಗುತ್ತಿಲ್ಲ ಇಂತಹ ಅನೇಕ ಸಮಸ್ಯೆಗಳು ಇರುವುದರಿಂದ ಇ-ಸ್ವತ್ತು ಜನರ ಕೈಗೆ ಸಿಗುತ್ತಿಲ್ಲ ಎಂದು ಜನರು ದೂರುತ್ತಾರೆ.

ಅನಂತರಾಜು ಇಒಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆ ಸರಿಪಡಿಸಲಾಗಿದೆ ಎಂದು ಮೇಲಧಿಕಾರಿಗಳು ಹೇಳಿದ್ದಾರೆ. ಮಾಸ್ಟರ್ ಟ್ರೈನರ್‌ಗಳ ಜೊತೆ ಇ-ಖಾತಾ ಅರ್ಜಿ ಹಾಕುವ ವಸ್ತುಸ್ಥಿತಿ ಕುರಿತು ಚರ್ಚಿಸಿ ಆನಂತರ ಎಲ್ಲ ಪಿಡಿಒಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು. ಸಿದ್ದಲಿಂಗಸ್ವಾಮಿಸಿದ್ಧಲಿಂಗಸ್ವಾಮಿ ದೊಂಬರನಹಳ್ಳಿ ತುರುವೇಕೆರೆ ವಿಷ್ಣು ಸೇವಾ ಸಮಿತಿ ಸದಸ್ಯಗ್ರಾಮೀಣ ಪ್ರದೇಶದ ಜನರಿಗೆ ಅಥವಾ ಸ್ವತ್ತುಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ನೀಡಲು ಸರ್ಕಾರ ನಾಮಕಾವಸ್ಥೆಗೆ ಇ- ಖಾತಾ ಅಭಿಯಾನ ಮಾಡಿದೆ. ಜನರು ಪಂಚಾಯಿತಿಗೆ ಅಲೆದಾಡುವಂತಾಗಿದೆ. ಕೂಡಲೇ ಸಮಸ್ಯೆ ಸರಿಪಡಿಸಲಿ. ತುರುವೇಕೆರೆ ಪಟ್ಟಣದ ವ್ಯಾಪ್ತಿಯಲ್ಲಿ ಈಗಾಗಲೇ 4.900 ಇ-ಖಾತೆಗಳು ಆಗಿವೆ. ಇನ್ನೂ 4000 ಬಾಕಿ ಇದ್ದು ಆಸ್ತಿ ಮಾಲೀಕರು ತಮ್ಮ ಮನೆಯಲ್ಲೇ ಆನ್‌ಲೈನ್ ಅಥವಾ ಗ್ರಾಮ್ ಒನ್‌ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಹಾಕಿದರೆ ಅದು ಪಟ್ಟಣ ಪಂಚಾಯಿತಿ ಲಾಗಿನ್‌ಗೆ ಬರುತ್ತದೆ. ಅದನ್ನು ಕಚೇರಿ ದಾಖಲೆಯೊಂದಿಗೆ ಪರಿಶೀಲಿಸಿ ಅನುಮೋದನೆ ನೀಡಲಾಗುವುದು. ಇದಕ್ಕಾಗಿ ಕಚೇರಿಗೆ ಜನರು ಅಲೆಯುವ ಅಗತ್ಯವಿಲ್ಲ. ಪಟ್ಟಣಿಗರು ಇ-ಸ್ವತ್ತು ಪಡೆಯುವ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ತಿಳಿಸಿದರು.ಕಚೇರಿಗೆ ಅಲೆಯುವ ಅಗತ್ಯವಿಲ್ಲ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48858+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48891+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48891+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48920+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49084+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49151+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49272+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49458+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49402+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49570+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49575+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49591+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49588+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49614+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49634+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51092+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51177+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51502+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51506+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51940+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51925+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56884+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56867+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56877+