ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹುಣಸೂರಿನಲ್ಲಿ ಬಿ-ಖಾತಾ ಡಬಲ್ ಕಂದಾಯದ ಅನ್ಯಾಯದ ವಿರುದ್ಧ ಸತ್ಯ ಎಂ ಎಸ್ ಫೌಂಡೇಶನ್ ಆರೋಪ
ವರದಿಗಾರರು : ಚೇತನ್ ರಾಜ್ ಟಿ ಎಸ್ | ಸ್ಥಳ : ಹುಣಸೂರ್ | ದಿನಾಂಕ : 21-11-2025

ಹುಣಸೂರಿನಲ್ಲಿ ಬಿ-ಖಾತಾ ಡಬಲ್ ಕಂದಾಯದ ಅನ್ಯಾಯದ ವಿರುದ್ಧ ಸತ್ಯ ಎಂ ಎಸ್ ಫೌಂಡೇಶನ್ ಆರೋಪ

1000ಕ್ಕೂ ಹೆಚ್ಚು ಕುಟುಂಬಗಳು ದ್ವಿಗುಣ ಕಂದಾಯ ಪಾವತಿಸಿ ನಷ್ಟ; ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯ ಹುಣಸೂರು: ಅನಧಿಕೃತ ಬಡಾವಣೆಗಳಲ್ಲಿ ವಾಸಿಸುವNearly 1000 ಕುಟುಂಬಗಳು ಬಿ-ಖಾತಾ ಪ್ರಕ್ರಿಯೆಯ ಹೆಸರಿನಲ್ಲಿ ಡಬಲ್ ಕಂದಾಯ ಪಾವತಿಸಿ ಅನ್ಯಾಯಕ್ಕೊಳಗಾಗಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಈ ವಿಷಯದಲ್ಲಿ ನಗರಸಭೆಯ ತಾರತಮ್ಯ ಕ್ರಮವನ್ನು ಖಂಡಿಸಿ, ತಕ್ಷಣದ ಪರಿಹಾರಕ್ಕೆ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಬೇಕೆಂದು ಸತ್ಯ ಎಂ ಎಸ್ ಫೌಂಡೇಶನ್ ಒತ್ತಾಯಿಸಿದೆ. ಸಂಸ್ಥೆಯ ಅಧ್ಯಕ್ಷ ಸತ್ಯಪ್ಪ ರವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸರ್ಕಾರದ ಬಿ-ಖಾತಾ ಆದೇಶವನ್ನು ನೆಪವಿಟ್ಟು ಹುಣಸೂರು ನಗರಸಭೆಯು ಐದು ವರ್ಷಗಳ ಡಬಲ್ ಕಂದಾಯವನ್ನು ಬಲವಂತವಾಗಿ ಸಂಗ್ರಹಿಸಿದೆ. ಪಕ್ಕದ ತಾಲೂಕುಗಳಲ್ಲಿ ಸಿಂಗಲ್ ಕಂದಾಯ ಮಾತ್ರ ಪಾವತಿಸಿಕೊಳ್ಳುತ್ತಿರುವುದು ಅಧಿಕಾರಿಗಳ ತಾರತಮ್ಯ ನೀತಿಯನ್ನು ಬಯಲು ಮಾಡುತ್ತದೆ,” ಎಂದು ಆರೋಪಿಸಿದರು.

ಅವರ ಹೇಳಿಕೆಯ ಪ್ರಕಾರ, ಹುಣಸೂರು ತಾಲ್ಲೂಕಿನಲ್ಲಿ 8000ಕ್ಕೂ ಹೆಚ್ಚು ಕುಟುಂಬಗಳು ಅನಧಿಕೃತ ಬಡಾವಣೆಗಳಲ್ಲಿ ವಾಸವಾಗಿದ್ದು, ಡಬಲ್ ಕಂದಾಯಕ್ಕೆ ಸಂಬಂಧಿಸಿದ ಸರಕಾರದ ಯಾವುದೇ ಅಧಿಕೃತ ಆದೇಶವನ್ನು ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ನಗರಸಭೆ ಅಧಿಕಾರಿಗಳು ಮೌನ ವಹಿಸುತ್ತಿದ್ದಾರೆ. ಸತ್ಯ ಎಂ ಎಸ್ ಫೌಂಡೇಶನ್ ಮಾರ್ಚ್ 27, 2025ರಂದು ಉಪವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಅನಂತರ ಸರ್ಕಾರವು ನಗರಸಭೆಗೆ ಸಿಂಗಲ್ ಕಂದಾಯವಷ್ಟೇ ಸಂಗ್ರಹಿಸಬೇಕು ಎಂದು ಸೂಚಿಸಿದೆ. ಇದರಿಂದ 8000ಕ್ಕೂ ಹೆಚ್ಚು ಫಲಾನುಭವಿಗಳಿಗೆ ರಿಲೀಫ್ ಸಿಕ್ಕಿದೆ.

ಮುಂಚಿತವಾಗಿ ಡಬಲ್ ಕಂದಾಯ ಪಾವತಿಸಿದ ಸುಮಾರು 1000 ಕುಟುಂಬಗಳಿಗೆ ಪರಿಹಾರ ಅಥವಾ ಸಮಂಜಸ ವಿವರಣೆ ನೀಡದಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ. ಕೋಟ್ಯಾಂತರ ರೂಪಾಯಿ ಕಂದಾಯ ಸಂಗ್ರಹಿಸಿದರೂ ನಗರಾಭಿವೃದ್ಧಿಗೆ ಬಳಸಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಹಾಲಿ ಮಾಜಿ ಶಾಸಕರು, ಸಂಸದರು ವಿಷಯದ ಬಗ್ಗೆ ಮೌನ ವಹಿಸಿರುವುದು ವಿಷಾದನೀಯ ಎಂದ ಸತ್ಯಪ್ಪ ರವರು, “ಜಿಲ್ಲಾಧಿಕಾರಿ ಈಗ ನಗರಸಭೆ ಅಧ್ಯಕ್ಷರ ಹುದ್ದೆ ಕೂಡ ವಹಿಸಿಕೊಂಡಿದ್ದಾರೆ. ಆದ್ದರಿಂದ ತಕ್ಷಣ ಮಧ್ಯಪ್ರವೇಶಿಸಿ ಅನ್ಯಾಯಕ್ಕೊಳಗಾದ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ನಗರಸಭೆ ಕಚೇರಿ ಮುಂಭಾಗದಲ್ಲಿ ಮಹಾಪ್ರತಿಭಟನೆ ನಡೆಸಲಾಗುವುದು,” ಎಂದು ಎಚ್ಚರಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+