ಮಹಿಳೆಯರ ಸ್ವಾವಲಂಬನೆಯಿಂದ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ:ರಜನಿ ದೇಸಾಯಿ
ವಿಜಯನಗರ.ನ.18:ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಾಗ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಎಸ್.ಎಲ್.ಆರ್ ಮೆಟಾಲಿಕ್ಸ್ ಹೆಚ್.ಆರ್ ವಿಭಾಗದ ರಜನಿ ದೇಸಾಯಿ ಹೇಳಿದರು.
ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಗ್ರಾಮದಲ್ಲಿ ಮಂಗಳವಾರ ಎಸ್.ಎಲ್.ಆರ್ ಮೆಟಾಲಿಕ್ಸ್ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ 6 ತಿಂಗಳ ಕಾಲ ಉಚಿತ ಹೊಲಿಗೆ ಯಂತ್ರ ತರಬೇತಿ ಶಿಬಿರದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ಮಹಿಳೆ ಸ್ವಯಂ ಉದ್ಯೋಗ ಪಡೆದುಕೊಂಡಾಗ ಇಡೀ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ದೂರು ಮಾಡುವುದಕ್ಕೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸಬಲೀಕರಣರದಾಗ ಮಾತ್ರ ದೇಶ ಅಭಿವೃದ್ಧಿ ಹೊಂದುವುದಕ್ಕೆ ಸಾಧ್ಯವಾಗುತ್ತದೆ, ಪ್ರತಿಯೊಬ್ಬರು ಕೂಡ ಈ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದರು.
ಸಿಎಸ್.ಆರ್ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಮಾತನಾಡಿ, ನಮ್ಮ ಸಂಸ್ಥೆಯಿಂದ ನೀವು ತರಬೇತಿ ಪಡೆದುಕೊಂಡು ಟೈಲರಿಂಗ್ ಶಾಪ್ ಅಥವಾ ನೀವು ಇನ್ನೊಬ್ಬರಿಗೆ ತರಬೇತಿ ನೀಡಿದಾಗ ಇನ್ನೊಷ್ಟು ಸಾರ್ಥವಾಗುತ್ತದೆ ಇದರ ಜತೆಗೆ ವಿದ್ಯಾರ್ಥಿಮಿತ್ರ, ರೈತ ಮಿತ್ರ ಹೀಗೆ ಹಲವಾರು ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಅದರ ಸದುಪಯೋಗವನ್ನು ಪ್ರತಿಯೊಬ್ಬರು ಕೊಳ್ಳಿ ಎಂದರು.
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷ ಪ್ರಾಸ್ತಾವಿಕವಾಗಿ ಭೀಮರಾಜ ಮಾತನಾಡಿದರು. ಇದೇ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಅಖಿಲ ಭಾನು, ಗ್ರಾ.ಪಂ ಸದಸ್ಯ ಕುಮಾರೆಪ್ಪ, ಗ್ರಾಮದ ಮುಖಂಡರಾದ ಹುಸೇನ್ ಪೀರ್, ವಿರೂಪಾಕ್ಷ ಗೌಡ್ರು, ವೆಂಕಟೇಶ, ಹೆಚ್.ಕೆ ಶಿವಪ್ಪ, ಮರಿಬಸಪ್ಪ, ಲಿಂಗನಗೌಡ್ರು, ಪ್ರಭು, ಬಸವರಾಜ ತರಬೇತಿ ಶಿಕ್ಷಕಿ ಸುವರ್ಣಮ್ಮ ಕಂಪನಿ ಅಧಿಕಾರಿಗಳಾದ ರಜನಿ ದೇಸಾಯಿ & ಲಕ್ಮಿ ವಡ್ಡರ್ ವಿದ್ಯಾರ್ಥಿಗಳಾದ ಚಂದ್ರಕಲಾ, ದುರುಗಮ್ಮ, ಉಷಾ ಸೇರದಂತೆ ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.
ಬಾಕ್ಸ್ ಐಟಮ್ ಆರು ತಿಂಗಳ ಕಾಲ ಉಚಿತ ಹೊಲಿಗೆ ಯಂತ್ರ ತರಬೇತಿ ಪಡೆದದುಕೊಂಡು ಸ್ವಯಂ ಉದ್ಯೋಗಿಗಳಾಗಿ ಕೆಲಸ ಮಾಡಿ ಮನೆಯ ಆರ್ಥಿಕ ಸುಧಾರಿಸಿಕೊಳ್ಳಿ: ಸಿ.ಎಸ್.ಆರ್ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ. ಕೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
ಇತರೆ ಸುದ್ದಿಗಳು