ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹನುಮ ಜಯಂತಿ ಮೆರವಣಿಗೆ ಶಾಂತಿಯುತವಾಗಿರಲಿ: ಎಸ್‌.ಪಿ. ವಿಷ್ಟುವರ್ದನ್ ಮನವಿ
ವರದಿಗಾರರು : - ಕೆಂಡೇಶ್ ಸೂರ್ಯ | ಸ್ಥಳ : ಹುಣಸೂರು* | ದಿನಾಂಕ : 27-11-2025

ಹನುಮ ಜಯಂತಿ ಮೆರವಣಿಗೆ ಶಾಂತಿಯುತವಾಗಿರಲಿ: ಎಸ್‌.ಪಿ. ವಿಷ್ಟುವರ್ದನ್ ಮನವಿ

ಹುಣಸೂರು: ಡಿಸೆಂಬರ್ 4ರಂದು ನಡೆಯಲಿರುವ ಹನುಮ ಜಯಂತಿ ಮೆರವಣಿಗೆಯನ್ನು ಸೌಹಾರ್ದಯುತವಾಗಿ, ಶಾಂತಿಯುತವಾಗಿ ಆಚರಿಸಲು ಎಲ್ಲ ವರ್ಗದ ನಾಗರಿಕರು ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಟುವರ್ದನ್ ಮನವಿ ಮಾಡಿದರು. ನಗರ ಠಾಣೆಯಲ್ಲಿ ಸೋಮವಾರ ಆಯೋಜಿಸಿದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹುಣಸೂರು ಸದಾ ಶಾಂತಿಪ್ರಿಯರ ಊರಾಗಿ ಹೆಸರುವಾಸಿಯಾಗಿದೆ ಎಂದು ಹೇಳಿದರು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಡಿ.ಜೆ. ನಿಷೇಧ – ಜಾನಪದ ಕಲೆಗೆ ಆದ್ಯತೆ ಮೆರವಣಿಗೆಯಲ್ಲಿ ಡಿ.ಜೆ. ಪರಿಕರಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬದಲಾಗಿ ಜಾನಪದ ಕಲಾತಂಡಗಳು, ಡೊಳ್ಳು ಕುಣಿತ, ತಮಟೆ ಸೇರಿದಂತೆ ಸಾಕಷ್ಟು ಪರಂಪರೆಯ ಕಲಾವಿದರನ್ನು ಆಮಂತ್ರಿಸಲು ಸಲಹೆ ನೀಡಿದರು. ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ಅಳವಡಿಸಿದರೆ ಅವನ್ನು ತೆರವುಗೊಳಿಸುವ ಜವಾಬ್ದಾರಿಯೂ ಆಯೋಜಕರ ಮೇಲಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ ಜಯಂತಿ ವೇಳೆಯಲ್ಲಿ ಸಾಮಾಜಿಕ ಜಾಲತಾಣಗಳ ದುರ್ಬಳಕೆ ಸಂಭವನೀಯ. ಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆಯಿಂದ ಇರಬೇಕೆಂದು ಎಸ್‌.ಪಿ. ಎಚ್ಚರಿಸಿದರು. ಸಂದೇಶಗಳ ಸತ್ಯಾಸತ್ಯತೆ ಕುರಿತು ಅನುಮಾನವಿದ್ದಲ್ಲಿ ಬೀಟ್ ಪೊಲೀಸ್ ಅಥವಾ ಅಧಿಕಾರಿಗಳೊಂದಿಗೆ ಪರಿಶೀಲಿಸಿ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಹೇಳಿದರು. ಮೆರವಣಿಗೆಯ ಸುಸೂತ್ರ ನಿರ್ವಹಣೆಗೆ ಕನಿಷ್ಠ 150 ಸ್ವಯಂಸೇವಕರನ್ನು ನೇಮಿಸಿಕೊಳ್ಳುವಂತೆ ಸಮಿತಿಗೆ ಸಲಹೆ ನೀಡಿದರು.

ಮೂರು ದಿನಗಳ ಹನುಮೋತ್ಸವ ಕಾರ್ಯಕ್ರಮ ತಾಲೂಕು ಹನುಮಂತೋತ್ಸವ ಸಮಿತಿ ಅಧ್ಯಕ್ಷ ವಿ.ಎನ್. ದಾಸ್ ಮಾತನಾಡಿ, ಮೂರು ದಿನಗಳ ಜಯಂತಿ ಕಾರ್ಯಕ್ರಮ ವಿವರಿಸಿದರು. ಡಿ.2: ಹನುಮ ಪ್ರತಿಷ್ಠಾಪನೆ ಡಿ.3: ಸಾಂಸ್ಕೃತಿಕ ಕಾರ್ಯಕ್ರಮ ಡಿ.4: ಮೆರವಣಿಗೆ — ಬೆಳಗ್ಗೆ 11 ಗಂಟೆಗೆ ನಗರದ ರಂಗನಾಥ ಬಡಾವಣೆಯಿಂದ ಆರಂಭವಾಗಿ ಕಲ್ಕುಣಿಕೆ ವೃತ್ತ, ಶಬರಿಪ್ರಸಾದ್ ವೃತ್ತ, ಹಳೆಯ ಸೇತುವೆ, ಸಂವಿಧಾನ ವೃತ್ತ, ಎಸ್‌ಜೆ ರಸ್ತೆ, ಎಚ್.ಡಿ. ಕೋಟೆ ವೃತ್ತ, ಜೆಎಲ್‌ಬಿ–ಬಜಾರ್ ರಸ್ತೆ, ಹೊಸ ಬಸ್ ನಿಲ್ದಾಣ ಮತ್ತು ಕಲ್ಪತರು ವೃತ್ತಗಳ ಮೂಲಕ ಆಂಜನೇಯಸ್ವಾಮಿ ದೇವಾಲಯದ ಆವರಣಕ್ಕೆ ಸಂಜೆ ತಲುಪಲಿದೆ. 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಭಾಗವಹಿಸಲಿದ್ದು, ಮಜ್ಜಿಗೆ, ತಂಪುಪಾನೀಯ, ಉಪಹಾರಗಳನ್ನು ಸಾರ್ವಜನಿಕರು ಭಕ್ತರಿಗೆ ನೀಡಲಿದ್ದಾರೆ ಎಂದು ತಿಳಿಸಿದರು.

ಸೌಹಾರ್ದಕ್ಕೆ ಆದ್ಯತೆ ನೀಡಿ – ತಹಸೀಲ್ದಾರ್ ತಹಸೀಲ್ದಾರ್ ಜೆ. ಮಂಜುನಾಥ್ ಮಾತನಾಡಿ, ವಾಟ್ಸಾಪ್–ಇನ್‌ಸ್ಟಾಗ್ರಾಂ ಪೋಸ್ಟ್‌ಗಳಿಗೆ ಮಹತ್ವ ಕೊಡದೆ, ಸೌಹಾರ್ದತೆಯನ್ನು ಕಾಪಾಡಿಕೊಂಡು ಜಯಂತಿ ಆಚರಿಸೋಣ ಎಂದು ಮನವಿ ಮಾಡಿದರು. ಸಭೆಯಲ್ಲಿ ಹನುಮಂತೋತ್ಸವ ಗೌರವಾಧ್ಯಕ್ಷ ಎಚ್‌.ವೈ. ಮಹದೇವ್, ಖಾಲಿದ್‌, ನಗರಸಭೆ ಮಾಜಿ ಸದಸ್ಯ ಕೃಷ್ಣರಾಜ ಗುಪ್ತ, ಸೈಯದ್ ಯೂನೂಸ್, ಸಾಗರ್ ಬಾಗಲ್, ಅನಿಲ್ ಕುಮಾರ್, ವರದರಾಜ ಪಿಳ್ಳೆ, ರಾಘು ಕಲ್ಕುಣಿಕೆ, ಸಲ್ಮಾನ್, ಇಮ್ರಾನ್, ಅಯೂಬ್, ನಯಾಜ್, ಮುಜಾಮಿಲ್, ಸುಹೇಲ್, ಡಿವೈಎಸ್‌ಪಿ ರವಿ, ನಗರ ಠಾಣೆ ಇನ್ಸ್‌പೆಕ್ಟರ್ ಸಂತೋಷ್ ಕಶ್ಯಪ್, ನಗರಸಭೆ ಪರಿಸರ ಇಂಜಿನಿಯರ್ ಸೌಮ್ಯ ಹಾಗೂ ಹಲವರು ಭಾಗವಹಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+