ಸರ್ಕಾರಿ ಶಾಲೆಗಳಲ್ಲಿ ಮಳಯಾಳ ಕಲಿಕೆ: ಕೇರಳ ಸರ್ಕಾರದ ದೋರಣೆಗೆ ರಾಜ್ಯದ ವಿರೋಧ – ಸಚಿವ ಕೆ. ವೆಂಕಟೇಶ್
ರಾಜ್ಯದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಮಳಯಾಳ ಕಲಿಸಿ ಎನ್ನುವ ಕೇರಳ ಸರ್ಕಾರದ ದೋರಣೆಯನ್ನು ರಾಜ್ಯ ಸರ್ಕಾರ ಮತ್ತು ಜನತೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು.
ಚಾಮರಾಜನಗರದಲ್ಲಿ ವಿಶ್ವ ರೈತ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಮಾದ್ಯಮದವರೊಂದಿಗೆ ಮಾತನಾಡಿ, ಕೇರಳ ರಾಜ್ಯ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮಳಯಾಳ ಕಲಿಕೆ ಕಡ್ಡಾಯ ಮಾಡಿ ಎಂದು ಹೇಳಿರುವುದು ಸರಿಯಲ್ಲ ಎಂದು ಹೇಳಿ, ಯಾವುದೇ ಕಾರಣಕ್ಕೂ ಕರ್ನಾಟಕದ ಶಾಲೆಗಳಲ್ಲಿ ಮಳಯಾಳ ಕಲಿಕೆ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ನಿಲುವು ತೆಗೆದುಕೊಂಡಿದೆ ಎಂದರು.
ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಉತ್ತಮವಾದ ರಸ್ತೆ ಹಾಗೂ ಸಾರಿಗೆ ಸೌಕರ್ಯ ಇಲ್ಲದಿರುವ ಬಗ್ಗೆ ವಿದ್ಯಾರ್ಥಿಗಳು ನಿರಂತರವಾಗಿ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮತ್ತು ವೀಡಿಯೋ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸಂಗತಿ ತಿಳಿದು ಬಂದಿದೆ. ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸಿ ರಸ್ತೆ ಮಾಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಳೆದ ನಾಲ್ಕು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ಕೊರತೆಯಿಂದಾಗಿ 32 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಸ್ಥರಿಗೆ ಇದೇ 26 ರೊಳಗೆ ಉದ್ಯೋಗ ನೀಡುವ ನೇಮಕಾತಿ ಪತ್ರ ನೀಡಲಾಗುವುದು ಅದೂ ಅಲ್ಲದೇ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ತನಿಖಾ ವರದಿಯಲ್ಲಿರುವಂತೆ ತಪ್ಪಿಸ್ಥರ ಮೇಲೆ ಕಾನೂನು ಕ್ರಮಕ್ಕೆ ಸರ್ಕಾರಕ್ಕೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.
ಇತರೆ ಸುದ್ದಿಗಳು