ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ
ವರದಿಗಾರರು : ಮಮತ | ಸ್ಥಳ : Bengaluru | ದಿನಾಂಕ : 06-01-2026

ಹೊಸ ಮೈಲಿಗಲ್ಲು ಸೃಷ್ಟಿಸಿದ ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಅಜ್ಜನ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಲಕ್ಷಾಂತರ ಭಕ್ತರ ಹರ್ಷೋದ್ಗಾರ, ಮೈಸೂರು ಪಾಕ್-ಪ್ರಸಾದದ ಘಮಲು 2026ರ ಮಹಾರಥೋತ್ಸವದ ಈ ಸಂಭ್ರಮಕ್ಕೆ ಈ ಬಾರಿ ವಿಶೇಷ ಮೆರುಗು ತಂದಿದೆ.

ಜಾತ್ರೆ ಎಂದರೆ ಅದು ಗವಿಸಿದ್ದಪ್ಪನ ಜಾತ್ರೆ ಎಂಬ ಮಾತನ್ನು ಈ ಬಾರಿಯೂ ಭಕ್ತರು ಸಾಬೀತುಪಡಿಸಿದ್ದಾರೆ. 2026ರ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಉತ್ತರ ಪ್ರದೇಶದ ಕುಂಭಮೇಳದಂತೆ ಜನಸಾಗರವೇ ಹರಿದು ಬಂದಿತ್ತು. ವಿಶೇಷವೆಂದರೆ ಕೊಪ್ಪಳದವರೇ ಆದ, ಮೇಘಾಲಯ ರಾಜ್ಯಪಾಲ ಹೆಚ್.ಸಿ. ವಿಜಯಶಂಕರ್ ಅವರು ಧ್ವಜಾರೋಹಣ ಮಾಡುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.

ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆ 'ಗವಿಸಿದ್ದೇಶ್ವರ ಮಹಾರಾಜ್ ಕೀ ಜೈ' ಎಂಬ ಘೋಷಣೆ ಮುಗಿಲು ಮುಟ್ಟಿತು. ಸುಮಾರು 8 ರಿಂದ 10 ಲಕ್ಷ ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ರಾಜ್ಯಪಾಲ ವಿಜಯಶಂಕರ್ ಅವರು ತಮ್ಮ ಭಾಷಣದಲ್ಲಿ, "ನನ್ನ ತವರು ಜಿಲ್ಲೆಯ ಈ ಭಕ್ತಿ ಪರಾಕಾಷ್ಠೆ ಕಂಡು ಧನ್ಯನಾದೆ" ಎಂದು ಭಾವುಕರಾದರು.

ಈ ಬಾರಿ ದಾಖಲೆ ಪ್ರಮಾಣದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸರಿಸುಮಾರು 25 ಲಕ್ಷ ಜೋಳದ ರೊಟ್ಟಿ, 20‌ ಲಕ್ಷ ಮೈಸೂರು ಪಾಕ್, 500 ಕ್ವಿಂಟಾಲ್ ಮಾದಲಿ ಹಾಗೂ ಹತ್ತಾರು ಬಗೆಯ ಪಲ್ಯಗಳನ್ನ ಖುದ್ಧು ಭಕ್ತರೇ ವ್ಯವಸ್ಥೆ ಮಾಡಿದ್ದರು.

ಸಮಾಜಮುಖಿ ಕಳಕಳಿಯ ಗವಿಮಠದ ಜಾತ್ರೆ ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲ, ಪ್ರತಿ ವರ್ಷದಂತೆ ಈ ವರ್ಷವೂ ಸಾಮಾಜಿಕ ಕಳಕಳಿಯ ಸಂದೇಶ ಸಾರಿದೆ. 'ಪರಿಸರ ಸಂರಕ್ಷಣೆ ಮತ್ತು ಜಲ ಜಾಗೃತಿ'ಯ ಘೋಷಣೆಗಳೊಂದಿಗೆ ಸಾಗಿದ ಈ ಜಾತ್ರೆ, ಆಧುನಿಕ ಕಾಲದಲ್ಲೂ ಸಂಪ್ರದಾಯ ಮತ್ತು ಸಮಾಜಸೇವೆಯ ಸಂಕೇತವಾಗಿದೆ.

ಜಿಲ್ಲಾಡಳಿತ ಹಾಗೂ ಮಠದ ಸ್ವಯಂಸೇವಕರು ಶಿಸ್ತಿನ ವ್ಯವಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡರು. ಅಜ್ಜನ ಪಾದಸ್ಪರ್ಶ ಮಾಡಿ, ಮಹಾಪ್ರಸಾದ ಸ್ವೀಕರಿಸಿ ಭಕ್ತರು ಪುನೀತರಾದರು.

ಗವಿಸಿದ್ದೇಶ್ವರ ಜಾತ್ರೆ ಜನಸಂಖ್ಯೆ, ಭಕ್ತಿ ಮತ್ತು ದಾಸೋಹದ ವಿಚಾರದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಗವಿಸಿದ್ದಪ್ಪನ ಆಶೀರ್ವಾದ ನಾಡಿನ ಜನತೆಯ ಮೇಲೆ ಸದಾ ಇರಲಿ ಎಂಬ ಹಾರೈಕೆಯೊಂದಿಗೆ ಈ ಬಾರಿಯ ಮಹೋತ್ಸವ ಸಂಪನ್ನಗೊಂಡಿದೆ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+