ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಗುರುಮಠಕಲ್‌ನಲ್ಲಿ ₹26.60 ಕೋಟಿ ಸೋಲಾರ್ ಹೈಮಾಸ್ಟ್ ಹಗರಣ ಆರೋಪ — K.R.S ಪಕ್ಷದ ವಿನೂತನ ಪ್ರತಿಭಟನೆ
ವರದಿಗಾರರು : ಫಯಾಜ್ ತೇಲಿ | ಸ್ಥಳ : ಬಾಗಲಕೋಟೆ | ದಿನಾಂಕ : 29-11-2025

ಗುರುಮಠಕಲ್‌ನಲ್ಲಿ ₹26.60 ಕೋಟಿ ಸೋಲಾರ್ ಹೈಮಾಸ್ಟ್ ಹಗರಣ ಆರೋಪ — K.R.S ಪಕ್ಷದ ವಿನೂತನ ಪ್ರತಿಭಟನೆ

ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ 2024–25ನೇ ಸಾಲಿನ ಕೆ.ಕೆ.ಆರ್.ಡಿ.ಬಿ. (KKRDB) ಮೈಕ್ರೋ ಮತ್ತು ಸಾಮಾನ್ಯ ಯೋಜನೆ ಅಡಿ ಅಳವಡಿಸಲಾದ 226 ಸೋಲಾರ್ ಹೈಮಾಸ್ಟ್ ಕಂಬಗಳ ನಿರ್ಮಾಣ ಕಾಮಗಾರಿಯಲ್ಲಿ ಭಾರೀ ಮಟ್ಟದ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (K.R.S.) ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ. ಒಟ್ಟು ₹26 ಕೋಟಿ 60 ಲಕ್ಷ ವೆಚ್ಚದ ಈ ಯೋಜನೆಯಲ್ಲಿ ಪ್ರತಿ ಹೈಮಾಸ್ಟ್‌ಗೆ ₹10 ಲಕ್ಷ ಎಂದು ಅಂದಾಜಿಸಲಾಗಿದೆಯಾದರೂ, ನೆಲಮಟ್ಟದಲ್ಲಿ ಆಗಿರುವ ಕಾಮಗಾರಿ ಈ ಮೊತ್ತಕ್ಕೆ ಹೊಂದಿಕೆಯಾಗುವುದಿಲ್ಲವೆಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ಹೊರಬಿದ್ದ ಅವ್ಯವಹಾರಗಳು ಅನೇಕ ಕಡೆ ನಾಮಫಲಕಗಳಲ್ಲಿ ಅಂದಾಜು ಮೊತ್ತ ಹಾಗೂ ಏಜೆನ್ಸಿ ಹೆಸರು ಉಲ್ಲೇಖಿಸದೇ ಬಿಟ್ಟಿದ್ದಾರೆ. ಸೈದಾಪೂರ ಬಸ್ ನಿಲ್ದಾಣದಲ್ಲಿ ಮಾತ್ರ ₹10 ಲಕ್ಷ ವೆಚ್ಚವೆಂದು ಪೆನ್‌ನಿಂದ ಬರೆದಿರುವುದು, ಯೋಜನೆಯ ಪ್ರಾಮಾಣಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕೆಲವು ಸ್ಥಳಗಳಲ್ಲಿ ನಾಮಫಲಕಗಳನ್ನು ಹರಿದು ಹಾಕಿರುವುದು ಸಂಶಯಾಸ್ಪದವಾಗಿದೆ. ಸ್ಥಳ ಪರಿಶೀಲನೆ ನಡೆಸಿದಾಗ ₹10 ಲಕ್ಷ ಮೌಲ್ಯದ ಕಾಮಗಾರಿ ಆಗಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿರುವ ಗ್ರಾಮಗಳನ್ನು ಕಡೆಗಣಿಸಿ, ಹಣ ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಎಸ್ಸೈಟಿ ತನಿಖೆಗಾಗಿ ಮನವಿ ಪ್ರತಿಭಟನಾಕಾರರು ಯಾದಗಿರಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದು, ಅಂದಾಜು ಪತ್ರಿಕೆ, ಬಿಲ್ ತಯಾರಿಸಿದ ಅಧಿಕಾರಿಗಳ ವಿರುದ್ಧ ಎಸ್‌.ಐ.ಟಿ. ಮೂಲಕ ಉನ್ನತ ಮಟ್ಟದ ತನಿಖೆ ನಡೆಸಬೇಕು, ನಿಧಿಯನ್ನು ದುರ್ಬಳಕೆ ಮಾಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು, ಗುಣಮಟ್ಟದಂತೆ ಕೆಲಸ ಮಾಡದೇ ಇರುವ ಹೈಮಾಸ್ಟ್‌ಗಳನ್ನು ಮರುಗೌಣಮಟ್ಟದಿಂದ, ನಿಜವಾದ ₹10 ಲಕ್ಷ ವೆಚ್ಚದಲ್ಲೇ ಪುನಃ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದವರು ಈ ಪ್ರತಿಭಟನೆಯನ್ನು ಎಸ್. ನಿಜಲಿಂಗಪ್ಪ ಪೂಜಾರಿ (ಜಿಲ್ಲಾ ಪ್ರಧಾನ ಕಾರ್ಯದರ್ಶಿ), ಗುರುಮಠಕಲ್ ಪರಾಜಿತ MLA ಅಭ್ಯರ್ಥಿ, ಜಗನಾಥ್ ಎಸ್. ಚಿಂತನಹಳ್ಳಿ (ಜಿಲ್ಲಾಧ್ಯಕ್ಷರು), ವೀರೇಶ್ ಸಜ್ಜನ್ (ಜಯ ಕರ್ನಾಟಕ ರಕ್ಷಣಾ ಸೇನೆ ಅಧ್ಯಕ್ಷರು) ಮುಖ್ಯವಾಗಿ ನೇತೃತ್ವ ವಹಿಸಿದ್ದರು. ಇದೆಂತೆ ಆಂಜನೇಯ ಕಟ್ಟಿಮನಿ, ವಿಜಯ್ ಕಂದಳ್ಳಿ, ಜಯವಂತ ದಳಪತಿ, ಅನುರಾಧ ನಾಗರಬಂಡ, ಕಥಲ್ ಸಾಬ್, ಚಾಂದ್ ಪಾಶ ಯಲ್ಲಪ, ಶಿವರಾಜ್ ರಟ್ನಾಡಗಿ, ಸಿದ್ದು ನಾಯಕ್, ಶಾಂತರಾಜ್ ಯಲಸತಿ, ಶ್ರೀಶೈಲ ಬಾಗಿಲಿ, ಮಣಿಕಂಠ ನಾಟಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+