“ಯಾದಗಿರಿಯಲ್ಲಿ ಗಿರಿನಾಡು ಉತ್ಸವ–2025: ಗಿರಿನಾಡು ರತ್ನ ಪ್ರಶಸ್ತಿಗಳ ಜತೆಗೆ ಹ್ಯಾಸ–ಗಾಯನ ಸಂಭ್ರಮ”
ಯಾದಗಿರಿ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನವೆಂಬರ್ 28 ರಂದು ಸಂಜೆ 5 ಗಂಟೆಗೆ ಗಾಂಧಿ ವೃತ್ತದ ಪಂಪ ಮಹಾಕವಿ ಮಂಟಪದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಗಿರಿನಾಡು ಉತ್ಸವ–2025’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಟಿ.ಎನ್. ಭೀಮುನಾಯಕ ತಿಳಿಸಿದ್ದಾರೆ.
ಸೋಮವಾರ ಜಿಲ್ಲಾ ಕರವೇ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕರವೇ ಕಳೆದ ಏಳು ವರ್ಷಗಳಿಂದ ಕನ್ನಡ ನಾಡು–ನುಡಿಯನ್ನು ಬೆಳೆಸುವ ಹಾಗೂ ಉಳಿಸುವ ಧ್ಯೇಯದೊಂದಿಗೆ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಬ್ಬೇತುಮಕೂರಿನ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ. ಗಂಗಾಧರ ಸ್ವಾಮಿಗಳು, ಬೆಂಗಳೂರಿನ ಪಾಲನಹಳ್ಳಿ ಮಠದ ಡಾ. ಸಿದ್ದರಾಜು ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕ ನರಸಿಂಹ ನಾಯಕ್ (ರಾಜೂ ಗೌಡ) ಮತ್ತು ಬೆಂಗಳೂರಿನ ಉದ್ಯಮಿ ಡಾ. ಎಸ್.ಪಿ. ದಯಾನಂದ ನೆರವೇರಿಸಲಿದ್ದಾರೆ. ಯಾದಗಿರಿ ಶಾಸಕರು ಚನ್ನಾರೆಡ್ಡಿ ಪಾಟೀಲ್ ಮತ್ತು ಶರಣಗೌಡ ಕಂದಕೂರ ಜ್ಯೋತಿ ಬೆಳಗಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ವಿವಿಧ ಸಮುದಾಯಗಳ ಮುಖಂಡರಾದ ಹಣುಮೇಗೌಡ ಬೀರನಕಲ್, ಶರಣಪ್ಪ ಮಾನೇಗಾರ, ದೇವೇಂದ್ರನಾಥ ನಾದ್, ಲಲಿತಾ ಅನಪುರ ಮತ್ತು ಇತರರು ಭಾಗವಹಿಸಲಿದ್ದಾರೆ.
ಟಿ.ಎನ್. ಭೀಮುನಾಯಕ ಅವರು ಮುಂದಾಗಿ, “ಮುಂದಿನ ಮಾರ್ಚ್ ತಿಂಗಳಲ್ಲಿ ನಗರದಲ್ಲಿ 2,000 ಕರವೇ ಕಾರ್ಯಕರ್ತರಿಗೆ ಕನ್ನಡ ದೀಕ್ಷಾ ಕಾರ್ಯಕ್ರಮವನ್ನು ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಲಿದೆ,” ಎಂದು ತಿಳಿಸಿದರು.
ಟಿ.ಎನ್. ಭೀಮುನಾಯಕ ಅವರು ಮುಂದಾಗಿ, “ಮುಂದಿನ ಮಾರ್ಚ್ ತಿಂಗಳಲ್ಲಿ ನಗರದಲ್ಲಿ 2,000 ಕರವೇ ಕಾರ್ಯಕರ್ತರಿಗೆ ಕನ್ನಡ ದೀಕ್ಷಾ ಕಾರ್ಯಕ್ರಮವನ್ನು ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಲಿದೆ,” ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಸಂತೋಷ ನಿರ್ಮಲಕರ್, ತಾಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ನಗರಾಧ್ಯಕ್ಷ ಅಂಬ್ರೇಶ ಹತ್ತಿಮನಿ, ಉಪಾಧ್ಯಕ್ಷ ಪ್ರಕಾಶ ಪಾಟೀಲ್ ಜೈಗ್ರಾಮ, ವಡಗೇರಾ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗನೂರ, ಮಾಧ್ಯಮ ವಕ್ತಾರ ಸಿದ್ದಲಿಂಗರೆಡ್ಡಿ ಮುನಗಲ್, ರವಿ ನಾಯಕ್, ಮೌನೇಶ್ ಹಾಗೂ ಇತರರು ಉಪಸ್ಥಿತರಿದ್ದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
ಇತರೆ ಸುದ್ದಿಗಳು