ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 19-01-2026

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

ಭಾರತ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹರಿಯ ಕೈಟ್ವಾಲಿಯಾ ಗ್ರಾಮದಲ್ಲಿ ವಿಶ್ವದ ಅತಿದೊಡ್ಡ ಏಕ ಶಿವಲಿಂಗವನ್ನು ಅಧಿಕೃತವಾಗಿ ಪ್ರತಿಷ್ಠಾಪಿಸುವ ಮೂಲಕ ದೇಶವು ಐತಿಹಾಸಿಕ ದಾಖಲೆಗೆ ನಾಂದಿ ಹಾಡಿದೆ.

ವಿರಾಟ್ ರಾಮಾಯಣ ದೇವಾಲಯ ಆವರಣದಲ್ಲಿ ನಡೆದ ಈ ಭವ್ಯ ಶಿವಲಿಂಗ ಪ್ರತಿಷ್ಠಾಪನಾ ಸಮಾರಂಭವು ಅಪಾರ ಧಾರ್ಮಿಕ ವೈಭವಕ್ಕೆ ಸಾಕ್ಷಿಯಾಯಿತು. ವಾರಣಾಸಿ ಹಾಗೂ ಅಯೋಧ್ಯೆಯಿಂದ ಆಗಮಿಸಿದ ಪಂಡಿತರು ವೇದಮಂತ್ರಗಳ ಪಠಣದೊಂದಿಗೆ ಶಿವಲಿಂಗದ ಪ್ರಾಣ ಪ್ರತಿಷ್ಠೆ ನೆರವೇರಿಸಿದರು. ವಿಶೇಷ ಪೂಜೆಗಳು ನಡೆಯಿದ್ದು, ಸಮಾರಂಭದ ಭಾಗವಾಗಿ ಹೆಲಿಕಾಪ್ಟರ್ ಮೂಲಕ ಹೂವಿನ ಮಳೆಯನ್ನೂ ಸುರಿಸಲಾಯಿತು.

210 ಮೆಟ್ರಿಕ್ ಟನ್ ಶಿವಲಿಂಗ ಈ ಶಿವಲಿಂಗವು ಸಂಪೂರ್ಣವಾಗಿ ಗ್ರಾನೈಟ್ ಕಲ್ಲಿನಿಂದ ನಿರ್ಮಿಸಲ್ಪಟ್ಟಿದ್ದು, ಇದರ ಎತ್ತರ 33 ಅಡಿ ಮತ್ತು ತೂಕ ಸುಮಾರು 210 ಮೆಟ್ರಿಕ್ ಟನ್ ಆಗಿದೆ. ಇದು ಜಗತ್ತಿನಲ್ಲೇ ಅತಿದೊಡ್ಡ ಏಕ ಶಿವಲಿಂಗ ಎಂದು ಹೇಳಲಾಗುತ್ತಿದೆ. ಈ ಬೃಹತ್ ಶಿವಲಿಂಗವನ್ನು ಸ್ಥಾಪಿಸಲು ಎರಡು ದೊಡ್ಡ ಕ್ರೇನ್‌ಗಳ ಸಹಾಯವನ್ನು ಪಡೆದುಕೊಳ್ಳಲಾಗಿತ್ತು.

ಶಿವಲಿಂಗ ಪ್ರತಿಷ್ಠಾಪನೆಯ ನಂತರ, ದೇಶದ ಹಲವು ಪವಿತ್ರ ನದಿಗಳ ನೀರನ್ನು ಬಳಸಿ ಭೋಲೆನಾಥನಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಈ ಮಹಾ ಕಾರ್ಯಕ್ರಮದಲ್ಲಿ ಅನೇಕ ಸಂತರು, ಋಷಿಗಳು ಹಾಗೂ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಸಹಸ್ರ ಲಿಂಗಗಳ ವಿಶೇಷತೆ ಈ ಮಹಾ ಶಿವಲಿಂಗದ ಮತ್ತೊಂದು ವಿಶೇಷತೆ ಎಂದರೆ, ಇದರೊಂದಿಗೆ 1008 ಸಣ್ಣ ಶಿವಲಿಂಗಗಳು ಕೂಡ ಸೇರಿವೆ. ಇವುಗಳನ್ನು ಒಟ್ಟಾಗಿ ಸಹಸ್ರ ಶಿವಲಿಂಗ ಎಂದು ಕರೆಯಲಾಗುತ್ತದೆ. ಇದಕ್ಕೂ ಮೊದಲು ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಹಸ್ರ ಶಿವಲಿಂಗ ರಚನೆಯಾಗಿತ್ತು. ಆದರೆ, ಗಾತ್ರ ಮತ್ತು ತೂಕದ ದೃಷ್ಟಿಯಿಂದ ಕೈಟ್ವಾಲಿಯಾ ಶಿವಲಿಂಗವು ವಿಶಿಷ್ಟ ದಾಖಲೆ ನಿರ್ಮಿಸಿದೆ.

ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯವು 120 ಎಕರೆ ವಿಸ್ತೀರ್ಣದಲ್ಲಿ ರೂಪುಗೊಳ್ಳುತ್ತಿದೆ. ಪೂರ್ಣಗೊಂಡ ನಂತರ, ಇದರ ಮುಖ್ಯ ಶಿಖರವು 270 ಅಡಿ ಎತ್ತರ ಹೊಂದಿರಲಿದೆ. ಇದು ಅಯೋಧ್ಯೆಯ ರಾಮ ಮಂದಿರ ಹಾಗೂ ದೆಹಲಿಯ ಕುತುಬ್ ಮಿನಾರ್‌ಗಿಂತಲೂ ಎತ್ತರವಾಗಿರಲಿದೆ.

ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ, ವಿರಾಟ್ ರಾಮಾಯಣ ದೇವಾಲಯವು ದೇಶದಷ್ಟೇ ಅಲ್ಲದೆ ಜಗತ್ತಿನಲ್ಲಿಯೇ ಒಂದು ಅದ್ಭುತ ಧಾರ್ಮಿಕ ತಾಣವಾಗಿ ಗುರುತಿಸಿಕೊಳ್ಳಲಿದೆ. ಜಗತ್ತಿನ ಅತಿದೊಡ್ಡ ಶಿವಲಿಂಗ ಸ್ಥಾಪನೆಯೊಂದಿಗೆ ಭಾರತವು ತನ್ನ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಮೆರೆದಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 48848+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 48881+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 48881+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 48909+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49074+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49141+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49262+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49447+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49392+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49560+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49564+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49581+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49578+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49603+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49624+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51082+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51167+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51491+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51496+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 51929+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 51915+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 56874+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 56857+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 56867+