ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಷ್ಟ್ರೀಯ ಗಣಿತ ದಿನ
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 22-12-2025

ರಾಷ್ಟ್ರೀಯ ಗಣಿತ ದಿನ

ಶ್ರೇಷ್ಠ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ನೆನಪಿಗಾಗಿ ಡಿಸೆಂಬರ್ 22 ರಂದು ರಾಷ್ಡ್ರೀಯ ಗಣಿತ ದಿನವನ್ನಾಗಿ ಆಚರಿಸಲಾಗುತ್ತಿದೆ.

ಶ್ರೀನಿವಾಸ್ ರಾಮಾನುಜನ್ ಡಿಸೆಂಬರ್ 22 1887ರಂದು ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು‌ ಅವರ ಪೂರ್ಣ ಹೆಸರು ಶ್ರೀನಿವಾಸ್ ರಾಮಾನುಜನ್ ಅಯ್ಯಂಗಾರ್.

ಶ್ರೀನಿವಾಸ ರಾಮಾನುಜನ್ ಅವರು ಬಾಲ್ಯದಿಂದಲೇ ಗಣಿತ ವಿಷಯದ ಕುರಿತು ಅತೀವ ಆಸಕ್ತಿ ಹೊಂದಿದ್ದರು. ಗಣಿತ ಅವರ ಜೀವನದ ಅವಿಭಾಜ್ಯವೆಂಬಂತೆ ಅದರಲ್ಲಿ ತಲ್ಲಿನರಾಗಿದ್ದರು. ಗಣಿತ ಬಿಟ್ಟು ಬೇರೆ ವಿಷಯಗಳ ಬಗ್ಗೆ ಆಸಕ್ತಿ ಇರಲಿಲ್ಲ

ಎಪ್ ಎ ಪ್ರಥಮ ದರ್ಜೆ ವ್ಯಾಸಂಗದ ಸಮಯದಲ್ಲಿ ರಾಮಾನುಜನ್ ಅನುತ್ತೀರ್ಣರಾದರು. ಇದು ಅವರನ್ನು ಮಾನಸಿಕವಾಗಿ ಕುಗ್ಗಿಸಿಬಿಟ್ಟಿತು. ಅದಲ್ಲದೇ ಬಡತನದ ಬೇಗೆ ಅವರನ್ನ ಕಾಡುತ್ತಿತ್ತು. ಅವರಿಗೆ ಸಿಗುತ್ತಿದ್ದ ವಿದ್ಯಾರ್ಥಿವೇತನವೂ ಸ್ಥಗಿತವಾದವು. ಇದರಿಂದ ರಾಮಾನುಜನ್ ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬೇಕಾಯಿತು.

ತದ ನಂತರ ಅವರು ಮದ್ರಾಸ್ ಪೋರ್ಟನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು‌. ಆದರೆ ರಾಮಾನುಜನ್ ಅವರ ಗಣಿತದ ಆಸಕ್ತಿ ,ಪ್ರತಿಭೆಯಿಂದ ನಿರಂತರವಾಗಿ ಗಣಿತದಲ್ಲಿ ತಮ್ಮನ್ನ ತೊಡಗಿಸಿಕೊಂಡರು. ಇಂಗ್ಲೆಂಡಿನ ರಾಯಲ್ ಸೊಸೈಟಿ , ರಾಮಾನುಜನ್ ಅವರ ಗಣಿತಶಾಸ್ತ್ರದಲ್ಲಿದ್ದ ಚತುರತೆ ಪ್ರತಿಭೆಯನ್ನ ಗುರುತಿಸಿ ಜೊತೆಗಾರರನ್ನಾಗಿ ಆಯ್ಕೆ ಮಾಡಿದ್ದರು. ಇದರಿಂದ ಅವರ ಆಸಕ್ತಿ ವಿಷಯವಾಗಿದ್ದ ಗಣಿತದ ಅಧ್ಯಯನಕ್ಜೆ ಹೊಸ ಆಯಾಮ ಸಿಕ್ಕಂತಾಯಿತು. ಮುಂದೆ ಶ್ರೀನಿವಾಸ್ ರಾಮಾನುಜನ್ ಗಣಿತಶಾಸ್ತ್ರಜ್ಞರೆನಿಸಿಕೊಂಡರು.

1921 ಎಪ್ರಿಲ್ 26 ರಂದು ಶ್ರೀನಿವಾಸ್ ರಾಮಾನುಜನ್ 34 ನೇ ವಯಸ್ಸಿನಲ್ಲಿ ಇಹಲೋಕ ತ್ಯೇಜಿಸಿದರು.

ಕೇವಲ 34 ವರ್ಷಗಳಲ್ಲಿ ಗಣಿತಲೋಕದಲ್ಲಿ ಅಪ್ರತಿಮ ಸಾಧನೆಗೈದರು. ಭಾರತದ ಇತಿಹಾಸದಲ್ಲಿ ಮಹಾನ್ ಗಣಿತಶಾಸ್ತ್ರಜ್ಞರೆನೆಸಿಕೊಂಡರು. ಭಾರತ ಸರ್ಕಾರ 2012 ರಲ್ಲಿ ಶ್ರೀನಿವಾಸ್ ರಾಮಾನುಜನ್ ಅವರ ಸ್ಮರಣಾರ್ಥ ಡಿಸೆಂಬರ್ 22 ರಂದು ರಾಷ್ಟ್ರೀಯ ಗಣಿತ ದಿನವನ್ನಾಗಿ ಘೋಷಿಸಿತು.

ಕಷ್ಟಕಾರ್ಪಣ್ಯಗಳನ್ನ ಮೆಟ್ಟಿ ತಮ್ಮ ಪ್ರತಿಭಾ ಕೌಶಲ್ಯದಿಂದ ಅಪ್ರತಿಮ ಸಾಧನೆ ಮಾಡಿದ ಶ್ರೀನಿವಾಸ್ ರಾಮಾನುಜನ್ ಸಾಧಕರ ಪಾಲಿಗೆ ಚೈತನ್ಯ ಚಿಲುಮೆಯ ಆದರ್ಶ ವ್ಯಕ್ತಿಯಾಗಿದ್ದಾರೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49029+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49062+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49063+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49091+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49256+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49323+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49444+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49629+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49574+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49741+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49746+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49763+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49760+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49785+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49806+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51264+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51349+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51673+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51678+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52111+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52096+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57055+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57038+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57047+