ಜಮಖಂಡಿ ನಗರದಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ
ಸುಭದ್ರ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು, ಸಮಾಜದಲ್ಲಿ ಶಿಕ್ಷಕರನ್ನು ಸಾಕ್ಷಾತ್ ಬ್ರಹ್ಮನಂತೆ ಕಾಣುತ್ತಾರೆ. ಅದಕ್ಕೆ ಗೌರವ ತರುವಂತೆ ಎಲ್ಲಾ ಶಿಕ್ಷಕ ವೃಂದ, ಶಿಕ್ಷಣವನ್ನು ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ಆರ್ .ನಿರಾಣಿ ಹೇಳಿದರು.ನಗರದ ಬಸವ ಭವನದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜಮಖಂಡಿ ಜಂಟಿಯಾಗಿ ಹಮ್ಮಿಕೊಂಡಿದ್ದ ಸರ್ವಪಲ್ಲಿ ಡಾ: ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ತಹಶೀಲ್ದಾರ್ ಅನಿಲ್ ಬಡಿಗೇರ್ ಮಾತನಾಡಿ ಜೀವನದಲ್ಲಿ ತೃಪ್ತಿಪಡುವ ವೃತ್ತಿ ಇದ್ದರೆ ಅದು ಶಿಕ್ಷಕ ವೃತ್ತಿ, ಇಂದಿನ ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿವೆ ಅದನ್ನ ಸರಿದಾರಿಗೆ ತರುವ ಶಕ್ತಿ ಶಿಕ್ಷಕರಿಗೆ ಇದೆ ಎಂದರು.ಕಾರ್ಯಕ್ರಮದ ಸಾನಿಧ್ಯವನ್ನು ಓಲೆಮಠದ ಆನಂದ ದೇವರು ವಹಿಸಿ ಪ್ರತಿಯೊಬ್ಬರ ಉತ್ತಮ ಬದುಕು ಕಟ್ಟುವ ಶಿಕ್ಷಕ ದೇವ ಸ್ವರೂಪಿ, ಸಂಸ್ಕಾರಬರೀತ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು. ಶಾಸಕರಾದ ನಾಡೋಜ ಶ್ರೀ ಜಗದೀಶ ಗುಡಗುಂಟಿ ಅವರು ಡಾ: ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು ಶಿಕ್ಷಕರಿಗಾಗಿ ಆಯೋಜಿಸಿದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಶ್ರೀ ಈಶ್ವರ್ ವಾಳೆನ್ನವರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎ. ಕೆ. ಬಸಣ್ಣವರ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಶ್ರೀ ಬಿ. ಪಿ. ಬಾಗ್ಯನ್ನವರ್ ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ನರಸಿಂಹ ಕಲ್ಲೋಳಿ ಭಾಗವಹಿಸಿದ್ದರು.
ಇತರೆ ಸುದ್ದಿಗಳು